ವಿ ಕೆ ಕಡಬ ಬ್ಲಾಗ್ ಗೆ ನಿಮಗೆ ಸ್ವಾಗತ... *ಬಯಸದೆ ಬ೦ದ ಗೌರವ *ಸೇಮಿಗೆ ಕೊಟ್ಟರೂ ನಾವು ಹೋಗಲಿಲ್ಲ...!*ನನ್ನನ್ನು ಫೇಸ್ ಬುಕ್ ನಲ್ಲಿ ಸಂಪರ್ಕಿಸಿ vk kadaba .ಕಣ್ಣು ಕಾಣದ ಹುಡುಗಿ ಬಿಸಿ ಬಿಸಿ ಚಹಾ ಮಾಡುವ ವೈಖರಿ ಇದು ಅನುಭವದ ಅನಾವರಣ* ತುಳುಟೆ ಕತೆ ಕೇನ್ಲೆ -ತುಳು ಕತೆಗಳು ಈಗ ವಿ.ಕೆ ಆಡಿಯೋ ಬ್ಲಾಗ್ ನಲ್ಲಿ ಲಭ್ಯ* ಪ್ರತಿ ಆದಿತ್ಯವಾರ ರೇಡಿಯೋ ಸಾರಂಗ್107.8FM ನಲ್ಲಿ11:30 ಕ್ಕೆ ಬಿನ್ನೆರೆ ಪಾತೆರಕತೆ *ಒಲವಿನ ಹಾಡು ಸೋಮವಾರದಿ೦ದ-ಶುಕ್ರವಾರದವರೆಗೆ ಪ್ರತಿದಿನ 3:00 ರಿಂದ4:00ರವರೆಗೆ ನಿಮ್ಮ ಮೆಚ್ಚುಗೆಯ ಹಾಡಿಗಾಗಿ ಕರೆ ಮಾಡಿ-0824-2449744 * ನಿಮ್ಮ ಮನೆಯಲ್ಲಿ ಬಜೆ ಇದೆಯಾ?

Wednesday, April 29, 2015

"ಎಕ್ಕಸಕ" ಸಿನಿಮಾ ಮಾತ ಚಿತ್ರ ಮಂದಿರ ಡ್ ಮೇ ಒಂಜೆಡ್ದ್ ಬೊಕ್ಕ

ಲಕುಮಿ ಸಿನಿ ಕ್ರಿಯೇಶನ್ಸ್’ನವರ ಬಹುನಿರೀಕ್ಷಿತ ‘ಎಕ್ಕಸಕ’ ತುಳು ಸಿನಿಮಾ ಮೇ 1ರಂದು ತೆರೆಕಾಣಲಿದೆ.
ಕರಾವಳಿ ಭಾಗದ ಬಹುತೇಕ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಗೆಬರಲಿದೆ . ತುಳುರಂಗಭೂಮಿಯ ಹೆಸರಾಂತ ತಂಡವಾಗಿರುವ ಮಂಗಳೂರಿನ ‘ಲಕುಮಿ’ ಕಲಾವಿದರು ಇದರ ಸಂಸ್ಥಾಪಕ ಹಾಗೂ ಲೀಡ್ಸ್ ಗ್ರೂಪ್ ಆಫ್ ಕಂಪೆನಿಸ್‌ನ ಲಯನ್ ಕಿಶೋರ್ ಡಿ.ಶೆಟ್ಟಿ ನಿರ್ಮಾಣದಲ್ಲಿ ‘ಎಕ್ಕಸಕ’ ಸಿನಿಮಾ ಮೂಡಿಬಂದಿದೆ.
ಲ.ಚಂದ್ರಹಾಸ ಶೆಟ್ಟಿ ಹಾಗೂ ಲ.ಗಿರೀಶ್ ಶೆಟ್ಟಿಯವರು ಕೂಡಾ ಈ ಚಿತ್ರದ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಕನ್ನಡ ಸಿನಿಮಾರಂಗದಲ್ಲಿ ಕಳೆದ 10 ವರ್ಷಗಳಿಂದ ಹಲವಾರು ನಿರ್ದೇಶಕರೊಂದಿಗೆ ಕೆಲಸ ಮಾಡಿರುವ ಕೆ.ಸೂರಜ್ ಶೆಟ್ಟಿ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ಹಿತೇಷ್ ನಾಯಕ್ ಹಾಗೂ ಸೋನಾಲ್ ಮೊಂತೇರೊ ಪ್ರಮುಖ ಭೂಮಿಕೆಯಲ್ಲಿದ್ದು, ತುಳುನಾಡಿನ ಖ್ಯಾತ ಕಲಾವಿದರಾದ ನವೀನ್ ಡಿ.ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ಸತೀಶ್ ಬಂದಲೆ, ರಾಘವೇಂದ್ರ ರೈ, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನಶೆಟ್ಟಿ ಬೈಲೂರು, ಶೋಭರಾಜ್ ಪಾವೂರು, ಚೈತ್ರಶೆಟ್ಟಿ, ಮೊಹನ್ ಕೊಪ್ಪಳ, ಹರೀಶ್, ವಾಸು ಶೆಟ್ಟಿ ಮೊದಲಾದವರು ತಾರಾಗಣದಲ್ಲಿದ್ದಾರೆ.
‘ಉಗ್ರಂ’ ಕನ್ನಡ ಸಿನಿಮಾದಲ್ಲಿ ಮಿಂಚಿರುವ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನೀಡಿರುವ ‘ಎಕ್ಕಸಕ’ ಸಿನಿಮಾಕ್ಕೆ ಕನ್ನಡ ಸಿನಿಮಾ ಜಗತ್ತಿನ ಹಿರಿಯ ಛಾಯಾಗ್ರಾಹ ಕೃಷ್ಣ ಸಾರಥಿ ಅವರ ಛಾಯಾಗ್ರಹಣವಿದೆ. ಕನ್ನಡದ ಕೆ.ಆರ್.ಲಿಂಗರಾಜು ಸಂಕಲನದಲ್ಲಿ ತಮ್ಮ ಚಾಕಚಕ್ಯತೆಯನ್ನು ಮೆರೆದಿದ್ದಾರೆ.
ನಟ ರವಿಚಂದ್ರನ್‌ರ ಸಿನಿಮಾಗಳಲ್ಲಿ ಕೆಲಸ ಮಾಡಿರುವ ಹುಲಿವನ ನಾಗರಾಜ್ ‘ಎಕ್ಕಸಕ’ ಸಿನಿಮಾದ ಧ್ವನಿ ತಾಂತ್ರಿಕತೆಯಲ್ಲಿ ಕೈಯಾಡಿಸಿದ್ದು, ರಜನೀಕಾಂತರ ‘ಕೊಚಾಡಿಯನ್’ ತಮಿಳ್ ಸಿನಿಮಾಕ್ಕೆ ಗ್ರಾಫಿಕ್ಸ್ ಕೆಲಸ ಮಾಡಿರುವ ಹೈದರಾಬಾದ್‌ನ ಸ್ಟೂಡಿಯೊದಲ್ಲಿಯೇ ಗ್ರಾಫಿಕ್ಸ್ ಕಾರ್ಯ ಮಾಡಲಾಗಿದ್ದು, ಮುಂಬೈ ಹಾಗೂ ಬೆಂಗಳೂರಿನ ತಂತ್ರಜ್ಞರಿಂದ ಸಿನಿಮಾದ ವಿವಿಧ ತಾಂತ್ರಿಕ ಕಾರ್ಯ ನಡೆಸಲಾಗಿದೆ.ಧನು ಕುಮಾರ್ ಅವರ ಕೋರಿಯೋಗ್ರಫಿ ಈ ಚಿತ್ರಕ್ಕಿದ್ದು, ಸಿನಿಮಾದ ಹಾಡುಗಳು ಅದ್ದೂರಿಯಾಗಿ ಮೂಡಿಬಂದಿದೆ. ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಮಯೂರ್ ಆರ್.ಶೆಟ್ಟಿ ಹಾಡುಗಳ ಸಾಹಿತ್ಯ ಬರೆದಿದ್ದು, ವಸಂತ್ ಅಮಿನ್ ಹಾಗೂ ಡಿಬಿಸಿ ಶೇಖರ್ ಎರಡು ಹಾಡುಗಳನ್ನು ಬರೆದಿದ್ದಾರೆ. ಸಿನಿಮಾದಲ್ಲಿ ಒಟ್ಟು ಆರು ಹಾಡುಗಳಿವೆ. ಒಂದು ಹಾಡನ್ನು ಇಲ್ಲಿ ಕೇಳಿ.

ಕನ್ನಡ ಸಿನಿಮಾದ ಹೆಸರಾಂತ ಗಾಯಕರಾದ ಚಂದನ್ ಶೆಟ್ಟಿ, ಅನುರಾಧ ಭಟ್, ದುಬೈನ ಹೆಸರಾಂತ ಯುವ ಉದ್ಯಮಿ, ಗಾಯಕರೂ ಆಗಿರುವ ಹರೀಶ್ ಶೇರಿಗಾರ್ ದುಬೈ ಹಾಗೂ ಅಕ್ಷತಾ ರಾವ್ ದುಬೈ ಇವರು ತಮ್ಮ ಸುಮಧುರ ಕಂಠದ ಮೂಲಕ ಸುಶ್ರಾವ್ಯವಾಗಿ ಹಾಡಿದ್ದಾರೆ.
ಹಲವಾರು ಕನ್ನಡ ಹಾಗೂ ತುಳು ಸಿನಿಮಾದ ಪ್ರಚಾರ ವಿನ್ಯಾಸದಲ್ಲಿ ಕೈಯಾಡಿಸಿರುವ ದೇವಿ ರೈಯವರು ಈ ಸಿನಿಮಾದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದು, ಒಟ್ಟಾರೆ ಈ ಸಿನಿಮಾವು ಪ್ರೀತಿ-ಪ್ರೇಮದ ಜೊತೆಗೆ ಹಾಸ್ಯ-ಮನೋರಂಜನೆಯಿಂದ ಕೂಡಿದೆ ಎಂದು ಚಿತ್ರ ತಂಡ ತಿಳಿಸಿದೆ.

No comments:

Post a Comment